Jun 1, 2016

ಶಾಲಾ ಪ್ರವೇಶೋತ್ಸವ – 2016




ನೂತನ ಅಧ್ಯಯನ ವರ್ಷದ ಆರಂಭವು ಇಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿದವು. ಹೊಸ ಕನಸುಗಳೊಂದಿಗೆ ಮುಜುಂಗಾವಿನ ಪ್ರಶಾಂತ ಪರಿಸರದಲ್ಲಿ ವಿದ್ಯಾರ್ಜನೆಗೆ ಆಗಮಿಸಿದ ಪುಟಾಣಿಗಳನ್ನು ಬಲೂನು ಮತ್ತು ಸಿಹಿ ತಿಂಡಿಗಳನ್ನು ನೀಡಿ ಸ್ವಾಗತಿಸಲಾಯಿತು. ನಮ್ಮ ಸಂಭ್ರಮದ ಜೊತೆಗೆ ಕಾಸರಗೋಡಿನಲ್ಲಿ ಲೆಕ್ಕ ಪರಿಶೋಧಕರಾಗಿರುವ ಶಿವಶಂಕರ ಭಟ್ ಕೋಡಿಮೂಲೆ ಸಹಕರಿಸಿದರು. ಎಸ್.ಎಸ್.ಎಲ್.ಸಿ ಯಲ್ಲಿ ಆರ್ಥಿಕವಾಗಿ ಹಿಂದಿರುವ ವಿದ್ಯಾರ್ಥಿಗಳಿಗೆ ದಾನಿಗಳ ಸಹಾಯದಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯವಾದ ಸಹಾಯ ಧನವನ್ನು ವಿತರಿಸಲಾಯಿತು.
ಶಾಲಾ ಸಮಿತಿಯ ಅಧ್ಯಕ್ಷ ಶಂಕರನಾರಾಯಣ ರಾವ್ ಮುನ್ನಿಪ್ಪಾಡಿ ಸಭೆಯ ಅಧ್ಯಕ್ಷತೆ ವಹಿಸಿದರು. ಶಾಲಾ ಸಮಿತಿಯ ಶ್ರೀಕೃಷ್ಣ ಪ್ರಸಾದ್ ಕಾವೇರಿಕಾನ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ-ಮಾರ್ಗ, ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಪೆರಡಾನ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸೃಷ್ಟಿಕ್ ಮಯ್ಯ ಸ್ವಾಗತಿಸಿ, ಆಶ್ರಿತ್ ನಾರಾಯಣ ವಂದಿಸಿದರು. ಕಿಶೋರಕೃಷ್ಣ ಹೊಸಮನೆ ಕಾರ್ಯಕ್ರಮ ನಿರೂಪಿಸಿದರು.



May 4, 2016

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ

2016 ಮಾರ್ಚ್ ತಿಂಗಳಿನಲ್ಲಿ ಜರಗಿದ ಕೇರಳ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ದಾಖಲಿಸಿದ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳು.

Apr 1, 2016

‘ಪ್ರತಿಭಾ ಭಾರತೀ’



“ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳು ಹಿಂಜರಿಯಬಾರದು. ಅಧ್ಯಯನಕ್ಕೆ ಸಹಕಾರಿಯಾಗುವ ಗ್ರಂಥಾಲಯಗಳನ್ನು ಗರಿಷ್ಠ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಪ್ರತಿಭೆಯ ಪ್ರಕಟಣೆಗೆ ಅಗತ್ಯವಾದ ತಯಾರಿಗಳನ್ನು ಮಾಡಿಕೊಳ್ಳಬೇಕು. ಪ್ರತಿಭಾ ಪ್ರದರ್ಶನಗಳಲ್ಲಿ ಭಾಗವಹಿಸುವ ಮೂಲಕ ಸಭಾಕಂಪನವನ್ನು ಹೋಗಲಾಡಿಸಿಕೊಳ್ಳಬೇಕು.” ಎಂದು ನಿವೃತ್ತ ಮುಖ್ಯೋಪಾಧ್ಯಾಯ ಅಡ್ಕ ಸುಬ್ರಹ್ಮಣ್ಯ ಭಟ್ ಅಭಿಪ್ರಾಯಪಟ್ಟರು. ಅವರು ನಿನ್ನೆ 31.03.2016 ಗುರುವಾರ ನಮ್ಮ ವಿದ್ಯಾಪೀಠದಲ್ಲಿ ಅಧ್ಯಯನ ವರ್ಷದ ಕೊನೆಯ ’ಪ್ರತಿಭಾ ಭಾರತೀ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಕುಂಬಳೆಯ ದಂತವೈದ್ಯೆ ಡಾ|ಸುಭಾಷಿಣಿ ವಿದ್ಯಾರ್ಥಿಗಳಿಗೆ ದಂತ ಸ್ವಚ್ಚತೆಯ ಅಗತ್ಯ ಮತ್ತು ಶುಶ್ರೂಷೆಯ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಶ್ರಾವ್ಯಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸ್ಕಂದ ಮುರಳಿ ಸ್ವಾಗತಿಸಿ ಆದಿತ್ಯ ವಂದಿಸಿದರು. ಜಯಶ್ರೀ ಮತ್ತು ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

‘ಸ್ಪಂದನ 2016’



“ಸಂಸ್ಕಾರವಂತ ವಿದ್ಯಾಲಯದಲ್ಲಿ ಕಲಿಯುವ ವಿದ್ಯಾರ್ಥಿಗಳು ಭಾಗ್ಯವಂತರು. ಉಳಿದೆಡೆ ದೊರಕದ ಸಂಸ್ಕೃತಿ, ಸಂಪ್ರದಾಯವನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಇಲ್ಲಿ ಹಮ್ಮಿಕೊಳ್ಳುತ್ತಿರುವುದು ಸಂತಸದ ವಿಚಾರ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಪರೋಪಕಾರ, ಸನ್ನಡತೆ, ಪರಸ್ಪರ ವಿಶ್ವಾಸದ ಭಾವನೆಗಳನ್ನು ಬೆಳೆಸಿಕೊಳ್ಳಬೇಕು. ಸೂಕ್ತ ಸಂದರ್ಭದಲ್ಲಿ ಮಕ್ಕಳಿಗೆ ಬುದ್ಧಿಮಾತುಗಳನ್ನು ಹೇಳದಿದ್ದರೆ ತಾಯಿ ತಂದೆಯರು ಶತ್ರುಗಳಾಗಬಲ್ಲರು. ಆದ್ದರಿಂದ ಸಂಸ್ಕಾರಯುತ ಶಿಕ್ಷಣ ಕಾಲದ ಅಗತ್ಯವಾಗಿದೆ. ಇಲ್ಲಿ ಬೆಳಗಿದ ದೀಪ ಸರ್ವತ್ರ ಪಸರಿಸಲಿ.” ಎಂದು ಮಂಜೇಶ್ವರದ ಶ್ರೀ ಅನಂತೇಶ್ವರ ದೇವಳ ಪ್ರೌಢಶಾಲೆಯ  ನಿವೃತ್ತ ಮುಖ್ಯೋಪಾಧ್ಯಾಯ ಉದಯಶಂಕರ ಭಟ್ ಮುಂಡಕಾನ ಅಭಿಪ್ರಾಯಪಟ್ಟರು. ಅವರು ಮೊನ್ನೆ 30.03.2016 ಬುಧವಾರ ನಮ್ಮ ವಿದ್ಯಾಪೀಠದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ವಿದಾಯ ಸಮಾರಂಭ ’ಸ್ಪಂದನ 2016’ ಕಾರ್ಯಕ್ರಮದಲ್ಲಿ ಜ್ಞಾನದ ಸಂಕೇತವಾಗಿ ಪ್ರಜ್ವಲಿಸುತ್ತಿರುವ ದೀಪವನ್ನು ವಿದ್ಯಾರ್ಥಿಗಳಿಗೆ ನೀಡಿ ಮಾತನಾಡುತ್ತಿದ್ದರು.

ಶಾಲಾ ಸಮಿತಿಯ ಅಧ್ಯಕ್ಷ ಶಂಕರನಾರಾಯಣ ರಾವ್ ಮುನ್ನಿಪ್ಪಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಳ್ಳೇರಿಯಾ ಮಂಡಲ ವಿದ್ಯಾಪ್ರಧಾನರಾದ ಬಾಲಕೃಷ್ಣ ಶರ್ಮ ಅನಂತಪುರ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಕೋಶಾಧಿಕಾರಿ ಕೆ.ವೆಂಕಟ್ರಮಣ ಭಟ್ ಸೂರಂಬೈಲು, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸೃಷ್ಟಿಕ್ ಸ್ವಾಗತಿಸಿ ಆಶ್ರಿತ್ ವಂದಿಸಿದರು.

ವಿದ್ಯಾಪೀಠಕ್ಕೆ ಮಾಣಿಲ ಶ್ರೀ ಸ್ವಾಮೀಜಿ ಭೇಟಿ


ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು 28.03.2016 ಸೋಮವಾರ ನಮ್ಮ ವಿದ್ಯಾಪೀಠಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಶಾಲಾ ಸಮಿತಿಯ ಉಪಾಧ್ಯಕ್ಷ ಶ್ರೀಕೃಷ್ಣಪ್ರಸಾದ್ ಕಾವೇರಿಕಾನ, ಶಾಲಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ ಉಪಸ್ಥಿತರಿದ್ದರು.

Mar 19, 2016

ನೂತನ ಸಮಿತಿ


ವಿದ್ಯಾಪೀಠಕ್ಕೆ ನೂತನ ಶಾಲಾ ಸಮಿತಿಯನ್ನು ರೂಪಿಸಲಾಗಿದೆ. 
ಅಧ್ಯಕ್ಷರು: ಎಸ್.ಎನ್.ರಾವ್ ಮುನ್ನಿಪ್ಪಾಡಿ
ಉಪಾಧ್ಯಕ್ಷರು: ಕೃಷ್ಣ ಪ್ರಸಾದ್ ಕಾವೇರಿಕಾನ, ಚಂದ್ರಶೇಖರ ಭಟ್ ಎಯ್ಯೂರು
ಕಾರ್ಯದರ್ಶಿ: ಡಿ.ಕೆ.ಶ್ಯಾಮರಾಜ್ ದೊಡ್ಡಮಾಣಿ
ಕೋಶಾಧಿಕಾರಿ: ಕೆ.ವೆಂಕಟ್ರಮಣ ಭಟ್ ಸೂರಂಬೈಲು

ಸದಸ್ಯರು:
ಸತ್ಯಶಂಕರ ಭಟ್ ಹಿಳ್ಳೆಮನೆ, ಸೂರ್ಯನಾರಾಯಣ ಭಟ್ ಬೊಳುಂಬು, ಬಾಲಕೃಷ್ಣ ಶರ್ಮ ಅನಂತಪುರ, ಸುಕುಮಾರ ಬೆಟ್ಟಂಪಾಡಿ, ನಾರಾಯಣ ಜಿ.ಹೆಗಡೆ, ಶ್ರೀಮತಿ ಪದ್ಮಾವತಿ ಡಿ.ಪಿ.ಭಟ್, ಶ್ರೀಮತಿ ರೂಪಶ್ರೀ ಕೋಡಿಮೂಲೆ, ಶ್ರೀಮತಿ ಪಾರ್ವತಿ ಪೆರಡಾನ.

ವಿಶೇಷ ಆಹ್ವಾನಿತರು:
ಬಿ.ಜಿ.ರಾಮ ಭಟ್ ಗೋಳಿತ್ತಡ್ಕ, ಶ್ರೀಕೃಷ್ಣ ಭಟ್ ಮೀನಗದ್ದೆ, ಜಯಪ್ರಕಾಶ್ ಪಜಿಲ, ಶ್ರೀಮತಿ ಶಾರದಾ ಜಯಗೋವಿಂದ.

ಎಲ್ಲರಿಗೂ ಶುಭ ಹಾರೈಕೆಗಳು...

Feb 10, 2016

ವರ್ಧಂತ್ಯುತ್ಸವ ಸಂಪನ್ನ





ಮಕ್ಕಳೆಂದರೆ ಪ್ರಕೃತಿಯ ಕೊಡುಗೆಅವರಲ್ಲಿ ಪುಟಿದೇಳುವ ಉತ್ಸಾಹ ಎಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆಶ್ರೀರಾಮಚಂದ್ರಾಪುರ ಮಠದ ಶಾಲೆಗಳಲ್ಲಿ ಅಂತಹ ಉತ್ಸಾಹವನ್ನುಬೆಳೆಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆವೇದ ಗಣಿತಕ್ಕೂ  ವಿದ್ಯಾಸಂಸ್ಥೆಗಳಲ್ಲಿ ತರಬೇತಿ ನೀಡಲಾಗುತ್ತಿದೆಮಕ್ಕಳ ಕನಸುಗಳಿಗೆ  ವಿದ್ಯಾಸಂಸ್ಥೆಗಳಲ್ಲಿ ರೂಪಕಲ್ಪನೆಯನ್ನು ನೀಡಲು ಪ್ರಯತ್ನಿಸಲಾಗುತ್ತಿದೆಮಕ್ಕಳು ಬಾಣದಂತೆಹೂಡುವವನಿಗೆ ಗುರಿಯನ್ನು ತಲಪಿಸುವ ಜವಾಬ್ದಾರಿಯೂ ಇದೆ" ಎಂದು ಶ್ರೀರಾಮಚಂದ್ರಾಪುರ ಮಠದ ವಿದ್ಯಾವಿಭಾಗದ ಕಾರ್ಯದರ್ಶಿ ಡಾ|ಶಾರದಾ ಜಯಗೋವಿಂದ ಅಭಿಪ್ರಾಯಪಟ್ಟರು.  ಅವರು 06.02.2016 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ವರ್ಧಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಸತ್ಯಶಂಕರ ಭಟ್ ಹಿಳ್ಳೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರುಅಭ್ಯಾಗತರಾಗಿ ಕುಂಬಳೆ ಗ್ರಾಮ   ಪಂಚಾಯತು ಸದಸ್ಯ ಹರೀಶ ಗಟ್ಟಿ ಕೋಟೆಕ್ಕಾರ್ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂರ್ತಿಹೊಸದಿಗಂತ ಪತ್ರಿಕೆಯ ಮಂಗಳೂರು   ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ   ಶ್ರೀಮತಿ ಸಂಧ್ಯಾ.ವಿ.ಶೆಟ್ಟಿರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯಶಾಲಾ ಸಮಿತಿಯ ಕೆ.ವೆಂಕಟ್ರಮಣ ಭಟ್ ಸೂರಂಬೈಲು   ಭಾಗವಹಿಸಿದರುಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರುಅಧ್ಯಯನ ವರ್ಷದ   ವರದಿಯನ್ನು ಪ್ರಮುಖ ಶಿಕ್ಷಕಿ ಚಿತ್ರಾ ಸರಸ್ವತಿ ಪೆರಡಾನ ವಾಚಿಸಿದರು.

ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗಳ ‘ಬೆಳಕು’ ಮತ್ತು ‘ಜ್ಞಾನದೀಪ್ತಿ’ ಹಸ್ತಪ್ರತಿಗಳನ್ನು ಬಿಡುಗಡೆಗೊಳಿಸಲಾಯಿತುಶಾಲಾ ವಿದ್ಯಾರ್ಥಿಗಳಾದ   ಜಯಶ್ರೀ.ಎಂ.ಸಿ ಸ್ವಾಗತಿಸಿ,ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ-ಮಾರ್ಗ ವಂದಿಸಿದರುವಿದ್ಯಾರ್ಥಿನಿ ಅನನ್ಯ ಕಾರ್ಯಕ್ರಮ ನಿರೂಪಿಸಿದರು.

ದೀಪ ಪ್ರಜ್ವಲನೆಯೊಂದಿಗೆ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿಗಳಾದ ಹಸ್ಮುಖ್ ಪಟೇಲ್ ಮತ್ತು ಪ್ರಶಾಂತ ಪೈ   ನೆರವೇರಿಸಿದರುನಂತರ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಜರಗಿತು.

Jan 30, 2016

ಫೆಬ್ರವರಿ 6 ರಂದು ‘ವರ್ಧಂತ್ಯುತ್ಸವ’

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ನಮ್ಮ ವಿದ್ಯಾಪೀಠದ ವರ್ಧಂತ್ಯುತ್ಸವವು 06.02.2016ನೇ ಶನಿವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ದ್ವೀಪ ಪ್ರಜ್ವಲನೆ ನಡೆಸುವರು.
        ಅಪರಾಹ್ನ 3.00 ಗಂಟೆಯಿಂದ ಜರಗುವ ಸಮಾರೋಪ ಸಮಾರಂಭದಲ್ಲಿ ಶ್ರೀರಾಮಚಂದ್ರಾಪುರ ಮಠದ ವಿದ್ಯಾ ವಿಭಾಗದ ಕಾರ್ಯದರ್ಶಿ ಡಾ|ಶಾರದಾ ಜಯಗೋವಿಂದ, ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಸತ್ಯಶಂಕರ ಭಟ್ ಹಿಳ್ಳೆಮನೆ, ಕುಂಬಳೆ ಗ್ರಾಮ ಪಂಚಾಯತು ಸದಸ್ಯ ಹರೀಶ ಗಟ್ಟಿ ಕೋಟೆಕ್ಕಾರ್, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಕೈಲಾಸಮೂರ್ತಿ, ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀಮತಿ ಸಂಧ್ಯಾ.ವಿ.ಶೆಟ್ಟಿ ಪ್ರಮುಖ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

Jan 21, 2016

ಪ್ರತಿಭಾ ಭಾರತೀ - ಜನವರಿ 2016



      “ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಭಾರತಿಯು ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಸಚ್ಚಾರಿತ್ರ್ಯದ ನಿರ್ಮಾಣವು ಕಾಲದ ಅಗತ್ಯವಾಗಿದೆ. ನಿಟ್ಟಿನಲ್ಲಿ ಶಿಕ್ಷಕರ ಪರಿಶ್ರಮ ಅತ್ಯಗತ್ಯ. ಹಿರಿಯರ ಕಷ್ಟಗಳನ್ನು ಅರಿತು ಅವರಿಗೆ ಸಹಾಯ ನೀಡಲು ಮಕ್ಕಳು ಪ್ರಯತ್ನಿಸಬೇಕು.” ಎಂದು ಕುಂಬಳೆ ಗ್ರಾಮ ಪಂಚಾಯತು ಸದಸ್ಯಮುರಳೀಧರ ಯಾದವ್ ನಾಯ್ಕಾಪು ಅಭಿಪ್ರಾಯಪಟ್ಟರು. ಅವರು 01.01.2016 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ಐದನೆಯ ಪ್ರತಿಭಾ ಭಾರತೀ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿನಿ ದೀಕ್ಷಾ.ಎಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರುಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ದೊಡ್ಡಮಾಣಿಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನಸಂಸ್ಕೃತ ಶಿಕ್ಷಕ ಡಾ| ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರುಕುಂಬಳೆ ಗ್ರಾಮ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಮುರಳೀಧರ ಯಾದವ್ ಅವರನ್ನು ಗೌರವಿಸಲಾಯಿತುವಿದ್ಯಾರ್ಥಿಗಳಾದ ಲಿಖಿತ್ ಕುಮಾರ್ ಸ್ವಾಗತಿಸಿ ಲಕ್ಷ್ಮೀಶವಂದಿಸಿದರುಸುಹಾಸ್ ಮತ್ತು ಶ್ರೀಶಶ್ರೀ ಕಾರ್ಯಕ್ರಮ ನಿರೂಪಿಸಿದರು.

Oct 23, 2015

ಶಾರದಾ ಪೂಜೆ


ವರ್ಷಂಪ್ರತಿ ಆಚರಿಸುವಂತೆ ನಮ್ಮ ವಿದ್ಯಾಪೀಠದಲ್ಲಿ ಇಂದು ಶ್ರೀ ಶಾರದಾ ಪೂಜೆ ಮತ್ತು ವಿದ್ಯಾರಂಭ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವೇದಮೂರ್ತಿ ಕೋಣಮ್ಮೆ ಶ್ರೀ ಮಹಾದೇವ ಭಟ್ಟರ ಪೌರೋಹಿತ್ಯದಲ್ಲಿ ಕಾರ್ಯಕ್ರಮಗಳು ನಡೆದವು. ಶಾಲಾ ಸಮಿತಿಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್ ಮತ್ತು ಇತರರು ಉಪಸ್ಥಿತರಿದ್ದರು.

Oct 16, 2015

ಪ್ರತಿಭಾ ಭಾರತೀ - ಅಕ್ಟೋಬರ್


“ನಾವು ಭಾಷಾಪ್ರೇಮಿಗಳಾಗಿರಬೇಕು, ಯಾವುದೇ ಭಾಷೆಯನ್ನು ದ್ವೇಷಿಸಬಾರದು. ನಮ್ಮ ಪ್ರತಿಭೆಯನ್ನು ಉದ್ದೀಪನಗೊಳಿಸುವ ಮೂಲಕ ನಾವು ಭಾಷೆಗಳ ನಡುವೆ ಸಮನ್ವಯತೆಯನ್ನು ಸಾಧಿಸಬೇಕು. ಈ ನಿಟ್ಟಿನಲ್ಲಿ ಪ್ರತಿಭೆಗಳನ್ನು ಅನಾವರಣಗೊಳಿಸುವ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ದೊರೆಯುವಂತಾಗಬೇಕು.” ಎಂದು ಹವ್ಯಾಸಿ ಭಾಗವತ ಕಂಬಾರು ಕೇಶವ ಭಟ್ ಅಭಿಪ್ರಾಯಪಟ್ಟರು. ಅವರು ಇಂದು 16.10.2015 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ಅಕ್ಟೋಬರ್ ತಿಂಗಳ ’ಪ್ರತಿಭಾ ಭಾರತೀ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿ ಕಿಶೋರಕೃಷ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಗ್ರಾಮೋತ್ಥಾನ ಟ್ರಸ್ಟಿನ ಸ್ಥಳೀಯ ಅಧಿಕಾರಿ ಚಂದ್ರಶೇಖರ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸೃಷ್ಟಿಕ್ ಸ್ವಾಗತಿಸಿ ದೀಕ್ಷಾ.ಎಸ್ ವಂದಿಸಿದರು. ಅನನ್ಯ ಮತ್ತು ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.

Oct 2, 2015

ಸ್ವಚ್ಛ ಭಾರತ ಅಭಿಯಾನ




ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ನಮ್ಮ ಶಾಲಾ ಪರಿಸರದ ಶುಚೀಕರಣ ಕಾರ್ಯಕ್ರಮವು ಇಂದು ಜರಗಿತು. ಗ್ರಾಮೋತ್ಥಾನ ಸಮಿತಿಯ ಚಂದ್ರಶೇಖರ, ಮುನ್ನಿಪ್ಪಾಡಿ ಶಂಕರನಾರಾಯಣ ರಾವ್, ಶಾಲಾ ಸಮಿತಿಯ ಕೆ.ವೆಂಕಟ್ರಮಣ ಭಟ್ ಸೂರಂಬೈಲು ಮತ್ತು ಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ನೇತೃತ್ವ ವಹಿಸಿದ್ದರು.

Sep 8, 2015

ಶ್ರೀಕೃಷ್ಣ ಜಯಂತಿ ಉತ್ಸವ 2015



“ಯಾವುದು ಮಹಾಭಾರತದಲ್ಲಿ ಇಲ್ಲವೋ ಅದು ನಮ್ಮ ಭರತ ಭೂಮಿಯಲ್ಲಿ ಇಲ್ಲ. ಯಾವುದು ಕೃಷ್ಣನಲ್ಲಿ ಇಲ್ಲವೋ ಅದು ನಮ್ಮಲ್ಲಿಲ್ಲ. ಕೃಷ್ಣ ನಿರಾಯುಧನಾಗಿ ಯುದ್ಧ ಭೂಮಿಯಲ್ಲಿ ನಿಂತ, ಭಗವದ್ಗೀತೆಯನ್ನು ಬೋಧಿಸಿದ. ಗೀತೆ ಜೀವನದ ಕನ್ನಡಿ. ನಮಗೆ ಏನು ಬೇಕೋ ಅದಕ್ಕೆ ಉತ್ತರ ಗೀತೆಯಲ್ಲಿದೆ. ಭಾರತದ ಎರಡನೆಯ ರಾಷ್ಟ್ರಪತಿ, ಶಿಕ್ಷಣ ಪ್ರೇಮಿ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಶ್ರೀಕೃಷ್ಣ ಪರಮಾತ್ಮನ ಜನ್ಮದಿನಗಳು ಒಂದೇ ದಿನ ಬಂದಿರುವುದು ಹಬ್ಬಗಳ ಸಂತಸವನ್ನು ಹೆಚ್ಚಿಸಿದೆ." ಎಂದು ಕಣ್ಣೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪಠ್ಯಪುಸ್ತಕ ನಿರ್ದೇಶಕ ಶಂಕರನಾರಾಯಣ ಹೊಳ್ಳ ಅಭಿಪ್ರಾಯಪಟ್ಟರು. ಅವರು ಕಳೆದ 05.09.2015 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಶ್ರೀಕೃಷ್ಣ ಜಯಂತಿ ಉತ್ಸವ ಮತ್ತು ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ಸಮಿತಿಯ ಜತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಸದಸ್ಯ ಕೆ.ವೆಂಕಟ್ರಮಣ ಭಟ್ ಸೂರಂಬೈಲು, ವೇದಮೂರ್ತಿ ಕಿಳಿಂಗಾರು ನಡುಮನೆ ಸುಬ್ರಾಯ ಭಟ್, ಗ್ರಾಮೋತ್ಥಾನ ಸಮಿತಿಯ ಅಧ್ಯಕ್ಷ ಶಂಕರನಾರಾಯಣ ರಾವ್ ಮುನ್ನಿಪ್ಪಾಡಿ, ಶ್ರೀ ಭಾರತೀ ವಿದ್ಯಾಪೀಠದ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆಮಾರ್ಗ, ಶ್ರೀ ಭಾರತೀ ವಿದ್ಯಾಪೀಠದ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಪೆರಡಾನ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ‘ಮುದ್ದು ಕೃಷ್ಣ’ ವೇಷ ಪ್ರದರ್ಶನ ಜರಗಿತು. ವಿದ್ಯಾರ್ಥಿಗಳಾದ ಕಾವ್ಯಶ್ರೀ ಸ್ವಾಗತಿಸಿ ಪ್ರೇಮಲತ ವಂದಿಸಿದರು. ವಿದ್ಯಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Sep 1, 2015

ರಕ್ಷಾ ಬಂಧನ 2015


“ಸಹೋದರ ಪ್ರೇಮದ ಸಂಕೇತವಾಗಿ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ಅಣ್ಣನಿಗೆ ರಕ್ಷೆಯನ್ನು ಕಟ್ಟುವ ಮೂಲಕ ಸಹೋದರಿ ತನ್ನ ಬಾಳು ಚೆನ್ನಾಗಿರುವಂತೆ ಅಭಯವನ್ನು ಪಡೆದುಕೊಳ್ಳುತ್ತಾಳೆ. ಆಧುನಿಕ ಜಗತ್ತಿನ ಸುಖ ಸೌಕರ್ಯಗಳ ಎಡೆಯಲ್ಲಿ ಈ ರೀತಿಯ ಹಬ್ಬಗಳನ್ನು ಆಚರಿಸುವುದು ನೈತಿಕ ಮೌಲ್ಯದ ಉಳಿವಿಗೆ ಸಹಾಯಕವಾಗುತ್ತದೆ ಎಂದು ನಮ್ಮ ವಿದ್ಯಾಪೀಠದ ಜತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಅಭಿಪ್ರಾಯಪಟ್ಟರು. ಅವರು ನಿನ್ನೆ 31.08.2015 ಸೋಮವಾರ ನಮ್ಮ ವಿದ್ಯಾಪೀಠದಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆಮಾರ್ಗ, ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾ ಸರಸ್ವತಿ ಪೆರಡಾನ, ಶಿಕ್ಷಕಿಯರಾದ ಕಾವೇರಿ ಮತ್ತು ಶಿವಕುಮಾರಿ ಉಪಸ್ಥಿತರಿದ್ದರು. ದೀಕ್ಷಾ. ಎಸ್ ಕಾರ್ಯಕ್ರಮ ನಿರೂಪಿಸಿದರು.

Aug 23, 2015

ಓಣಂ ಆಚರಣೆ 2015





“ಮಲಯಾಳ ನಾಡಿನಲ್ಲಿ ಮಾತ್ರ ಆಚರಿಸಲ್ಪಡುತ್ತಿದ ಓಣಂ ಇಂದು ರಾಜ್ಯದ ವ್ಯಪ್ತಿಯನ್ನು ಮೀರಿ ಆಚರಿಸಲ್ಪಡುತ್ತಿದೆ. ಜಾತಿ, ಮತ ಬೇಧವಿಲ್ಲದೆ ನಾಡಿನ ಹಬ್ಬವಾಗಿ ಜನರು ಓಣಂ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಬ್ಬಗಳು ಜನರನ್ನು ಒಂದುಗೂಡಿಸುತ್ತವೆ. ಏಕತಾನತೆಯ ಬದುಕನ್ನು ಹೋಗಲಾಡಿಸಿ ಜೀವನದಲ್ಲಿ ಉತ್ಸಾಹ ಚಿಮ್ಮುವಂತೆ ಮಾಡುತ್ತದೆ” ಎಂದು ಸಹಕಾರ ಭಾರತೀ ಜಿಲ್ಲಾ ಕಾರ್ಯದರ್ಶಿ ಐತ್ತಪ್ಪ ಮವ್ವಾರು ಅಭಿಪ್ರಾಯಪಟ್ಟರು. ಅವರು ಮೊನ್ನೆ 21.08.2015 ಶುಕ್ರವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಓಣಂ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ಸಮಿತಿಯ ಜೊತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾ ಸರಸ್ವತಿ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಆಶ್ರಿತ್ ಸ್ವಾಗತಿಸಿ ಸಂಯುಕ್ತಾ ವಂದಿಸಿದರು. ಕಿಶೋರ್ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Aug 19, 2015

ರಾಮಾಯಣ ಮಾಸಾಚರಣೆ




“ರಾಮಾಯಣ ಆದರ್ಶ ಕಥಾನಕ. ಅಲ್ಲಿನ ಸಹೋದರ ಪ್ರೇಮ, ಪಿತೃವಾಕ್ಯ ಪರಿಪಾಲನೆಯ ನಿದರ್ಶನಗಳು ಕಲಿಯುಗದಲ್ಲೂ ಔಚಿತ್ಯಪೂರ್ಣವಾದವುಗಳು. ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ಈ ಸಂವತ್ಸರದ ರಾಮಾಯಣ ಮಾಸಾಚರಣೆಯೂ ಕೊನೆಗೊಳ್ಳುತ್ತಿರುವುದು ಯೋಗಾಯೋಗ. ಸ್ವಾತಂತ್ರ್ಯದ ಉಳಿವಿಗಾಗಿ ನಾವು ಕೈಗೊಳ್ಳುತ್ತಿರುವ ಪ್ರತಿಜ್ಞೆಯನ್ನು ಉಳಿಸಿಕೊಳ್ಳಲು ಸದಾಕಾಲ ಪ್ರಯತ್ನಿಸುತ್ತಿರಬೇಕು” ಎಂದು ನಿವೃತ್ತ ಉದ್ಯಮಿ ಶಂಕರನಾರಾಯಣ ಭಟ್ ಕೋಡಿಮೂಲೆ ಅಭಿಪ್ರಾಯಪಟ್ಟರು. ಅವರು ಕಳೆದ 15.08.2015 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ರಾಮಾಯಣ ಮಾಸಾಚರಣೆಯ ಸಮಾರೋಪ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ಶಾಲಾ ಸಮಿತಿಯ ಜೊತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಡನಾಡು ಕ್ಷೀರೋತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಶಂಕರನಾರಾಯಣ ರಾವ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾ ಸರಸ್ವತಿ, ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀಶ ಸ್ವಾಗತಿಸಿ ಸೃಷ್ಟಿಕ್ ವಂದಿಸಿದರು. ಶ್ರಾವ್ಯಾ ಕಾರ್ಯಕ್ರಮ ನಿರೂಪಿಸಿದರು.

Aug 3, 2015

ರಕ್ಷಕ ಶಿಕ್ಷಕ ಸಂಘದ ಸಭೆ


                ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು 01.08.2015 ಶನಿವಾರ ಜರಗಿತು. ಸಂದರ್ಭದಲ್ಲಿ ಪುರುಷೋತ್ತಮ ಆಚಾರ್ಯ ಮುಜುಂಗಾವು ಅಧ್ಯಕ್ಷರಾಗಿರುವ 2015-16ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಎಯ್ಯೂರು ಚಂದ್ರಶೇಖರ ಭಟ್, ಚಂದ್ರಶೇಖರ ಭಟ್ ಮಡ್ವ ಮತ್ತು ಶ್ರೀಮತಿ ಶೋಭನ ನಾಯ್ಕಾಪು ಇವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

                ನೂತನ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಪುರುಷೋತ್ತಮ ಭಟ್ ಕುಂಬಳೆ, ಶಶಿಧರ ಭಟ್ ಕುಂಬಳೆ, ಸುಬ್ರಾಯ ಹೇರಳ ಬಂದ್ಯೋಡು, ಕೃಷ್ಣನ್ ಮಾಯಿಪ್ಪಾಡಿ, ರಾಮಭಟ್ ಕಿದೂರು, ಶ್ರೀಮತಿ ವಿನಯಾ ಮುಂಡಕಾನ, ಶ್ರೀಮತಿ ಪದ್ಮಾವತಿ ಅನಂತಪುರ, ಶ್ರೀಮತಿ ಶೋಭಾ ನಾಯ್ಕಾಪು, ಶ್ರೀಮತಿ ಉಷಾ ಮಾಯಿಪ್ಪಾಡಿ, ಶ್ರೀಮತಿ ದೀಪಶ್ರೀ ದೊಡ್ಡಮಾಣಿ, ಶ್ರೀಮತಿ ಪಾರ್ವತಿ ಪೆರಡಾನ ಮತ್ತು ಶ್ರೀಮತಿ ಅರುಣಾದೇವಿ ಗೂಮೆಮೂಲೆ ಇವರನ್ನು ಆರಿಸಲಾಯಿತು.

Aug 2, 2015

ಗುರುಪೂರ್ಣಿಮಾ



ನಮ್ಮ ವಿದ್ಯಾಪೀಠದಲ್ಲಿ 31.07.2015 ಶುಕ್ರವಾರ ಗುರುಪೂರ್ಣಿಮೆ ಕಾರ್ಯಕ್ರಮವನ್ನು ವಿಶಿಷ್ಠವಾಗಿ ಆಚರಿಸಲಾಯಿತು. ಗ್ರಾಮಣಿ ಕೆ.ಎಸ್.ಶಂಕರ ಭಟ್ ಕಾವೇರಿಕಾನ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್ ಕುಂಬಳೆ, ಶಾಲಾ ಸಮಿತಿಯ ಜತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆಮಾರ್ಗ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಿತ್ರಾ ಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ|ಸದಾಶಿವ ಭಟ್.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಶ್ರೀಗುರು ಭಾವಚಿತ್ರಕ್ಕೆ ನಮಸ್ಕರಿಸಿ ಎಲ್ಲ ಹಿರಿಯರ ಆಶೀರ್ವಾದವನ್ನು ಬೇಡಿದರು.

Aug 1, 2015

‘ಪ್ರತಿಭಾ ಭಾರತೀ’ - ಜುಲೈ 2015


ಮನುಷ್ಯನು ತನ್ನ ಸಾಹಿತ್ಯ ಮತ್ತು ಬುದ್ಧಿವಂತಿಕೆಯ ಪ್ರದರ್ಶನದ ಮೂಲಕ ಇತರ ಪ್ರಾಣಿಗಳಿಗಿಂತ ವಿಭಿನ್ನವಾಗಿದ್ದಾನೆ. ಕಲಾಭಿರುಚಿಯನ್ನು ವ್ಯಕ್ತಪಡಿಸುವ ಮೂಲಕ ಆತ ಪರಿಪೂರ್ಣನಾಗಲು ಪ್ರಯತ್ನಿಸುತ್ತಾನೆ. ಸಂಸ್ಕೃತದಲ್ಲಿರುವ ಸುಭಾಷಿತಗಳು ತಮ್ಮ ಅರ್ಥ ಗಾಂಭೀರ್ಯದ ಮೂಲಕ ಜೀವನದ ಪಾಠಗಳನ್ನು ಹೇಳಿಕೊಡುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಅಧ್ಯಯನ ಮಾಡುವ ಮೂಲಕ ಜೀವನದಲ್ಲಿ ಅಳವಡಿಸಿಕೊಳ್ಳಲು ಸಾಧ್ಯವಾಗಬಹುದುಎಂದು ಸಂಸ್ಕೃತ ಶಿಕ್ಷಕ ಡಾ|ಎಸ್.ಸದಾಶಿವ ಭಟ್ ಅಭಿಪ್ರಾಯಪಟ್ಟರು. ಅವರು ನಿನ್ನೆ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಜುಲೈ ತಿಂಗಳ ಪ್ರತಿಭಾ ಭಾರತೀಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
 
ವಿದ್ಯಾರ್ಥಿ ಸ್ಕಂದ ಮುರಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಿತ್ರಾ ಸರಸ್ವತಿ ಪೆರಡಾನ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿ ದೀಕ್ಷಾ.ಎಸ್ ಹಿಂದಿನ ಕಾರ್ಯಕ್ರಮದ ವರದಿಯನ್ನು ಮಂಡಿಸಿದರು.

    ವಿದ್ಯಾರ್ಥಿಗಳಾದ ಸೃಷ್ಟಿಕ್ ಸ್ವಾಗತಿಸಿ ದೀಕ್ಷಾ ವಂದಿಸಿದರು. ಆದಿತ್ಯ ಮತ್ತು ಸುಧನ್ವ ಕಾರ್ಯಕ್ರಮ ನಿರೂಪಿಸಿದರು.


Jul 27, 2015

ವಿದ್ಯಾರ್ಥಿ ನಾಯಕರು - 2015-16


ನಮ್ಮ ವಿದ್ಯಾಪೀಠದ 2015-16ನೇ ಸಾಲಿನ ವಿದ್ಯಾರ್ಥಿ ನಾಯಕರಾಗಿ ಹತ್ತನೇ ತರಗತಿಯ ಅನನ್ಯ ಪೆರಡಾನ ಮತ್ತು ಉಪನಾಯಕರಾಗಿ ಎಂಟನೇ ತರಗತಿಯ ಶ್ರೀಶಶ್ರೀ ಆಯ್ಕೆಯಾಗಿದ್ದಾರೆ. ಶುಭಾಶಯಗಳು...

Jul 25, 2015

ಶಾಲಾ ವಾಹನ


ನಮ್ಮ ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಸೌಕರ್ಯಕ್ಕಾಗಿ ಹೊಸ ವಾಹನ ಬಂದಿದೆ. ದೂರದಿಂದ ಆಗಮಿಸುವ ವಿದ್ಯಾರ್ಥಿಗಳ ಸೌಕರ್ಯಕ್ಕಾಗಿ ಏರ್ಪಡಿಸಲಾಗಿರುವ ಈ ವಾಹನದ ಸೌಕರ್ಯವನ್ನು ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮಂದಿ ವಿದ್ಯಾರ್ಥಿಗಳು ಪಡೆಯುತ್ತಿದ್ದಾರೆ. ಈ ವಾಹನವನ್ನು ಖರೀದಿಸಲು ಸಹಕರಿಸಿದ ಎಲ್ಲ ಸಹೃದಯರಿಗೆ ಧನ್ಯವಾದಗಳು...

Jun 22, 2015

ಯೋಗ ದಿನಾಚರಣೆ



ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿರುವ ಯೋಗ ದಿನಾಚರಣೆಯನ್ನು ನಮ್ಮ ಶಾಲೆಯಲ್ಲೂ ಹಮ್ಮಿಕೊಳ್ಳಲಾಯಿತು. ಹಿರಿಯ ಯೋಗಶಿಕ್ಷಕ ಎಚ್.ಶಂಕರನಾರಾಯಣ ಭಟ್ಟ ಮತ್ತು ಸೀತಾಂಗೋಳಿ ರಾಮಕೃಷ್ಣ ಹೆಬ್ಬಾರ್ ಸೂಕ್ತ ಮಾರ್ಗದರ್ಶನ ನೀಡಿದರು. ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು...

Jun 6, 2015

ವಿಶ್ವ ಪರಿಸರ ದಿನಾಚರಣೆ


ನಮ್ಮ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವು ನಿನ್ನೆ 05.06.2015 ಶುಕ್ರವಾರ ಜರಗಿತು. ನಿವೃತ್ತ ಶಿಕ್ಷಕ ಡಾ|ಸದಾಶಿವ ಭಟ್ ಪೆರ್ಲ, ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ಲು, ಕೇಶವ ಪ್ರಸಾದ್ ನಾಣಿತ್ಲು ವಿವಿಧ ಸಸಿಗಳನ್ನು ನೆಡುವ ಮೂಲಕ ಮಕ್ಕಳ ಜೊತೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಿದರು.

‘ಸ್ವಾಗತ ಭಾರತೀ - 2015’

 ಹಿಂದಿನ ಕಾಲದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅವಕಾಶಗಳು ಇರಲಿಲ್ಲ. ಆದರೆ ಇಂದಿನ ಕಾಲದಲ್ಲಿ ಕಲಿಯುವಿಕೆಗೆ ಅಗತ್ಯವಾದ ಮತ್ತು ಪೂರಕವಾದ ವ್ಯವಸ್ಥೆಗಳು ಹಲವಾರು ಇವೆ. ವಿದ್ಯಾರ್ಥಿಗಳು ಮತ್ತು ರಕ್ಷಕರು ಈ ವ್ಯವಸ್ಥೆಗಳನ್ನು ಚೆನ್ನಾಗಿ ಬಳಸಿಕೊಳ್ಳಬೇಕು. ಶ್ರೀಗುರುಗಳ ಆಶೀರ್ವಾದ ಇಲ್ಲಿನ ವಿದ್ಯಾರ್ಥಿಗಳ ಮೇಲಿರುವುದು ವಿದ್ಯಾರ್ಥಿಗಳ ಸೌಭಾಗ್ಯ. ಕಲಿಕೆಯೊಂದಿಗೆ ಸಂಸ್ಕೃತಿ, ಪುರಾಣದ ಮಹತ್ವದ ಅಂಶಗಳನ್ನು ಕಲಿಸುತ್ತಿರುವುದು ಸಂತಸದ ವಿಚಾರ. ಇಂತಹ ಅವಕಾಶ ಎಲ್ಲ ಆಂಗ್ಲಮಾಧ್ಯಮ ಶಾಲೆಗಳಲ್ಲಿ ದೊರಕಲಾರದು. ಹತ್ತನೇ ತರಗತಿ ವಿದ್ಯಾರ್ಥಿಗಳ ಸತತ ನಾಲ್ಕನೇ ತಂಡವು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶವನ್ನು ದಾಖಲಿಸಿ ಮುಜುಂಗಾವು ಶಿಕ್ಷಣ ಸಂಸ್ಥೆಗಳ ಕಡೆಗೆ ಸಮಾಜದ ಗಮನವನ್ನು ಸೆಳೆದಿದೆ. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಸಂಕಲ್ಪದಂತೆ ರೂಪುಗೊಂಡ ವಿದ್ಯಾಸಂಸ್ಥೆ ಆದರ್ಶ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುತ್ತಿವೆ ಎನ್ನುವುದಕ್ಕೆ ಇದು ನೂತನ ನಿದರ್ಶನ ಎಂದು ಸಮಾಜ ಸೇವಕ ಯೋಗೀಶ ಕಡಮಣ್ಣಾಯ ಅಭಿಪ್ರಾಯಪಟ್ಟರು. ಅವರು ಮೊನ್ನೆ 01.06.2015 ಸೋಮವಾರ ನಮ್ಮ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಜರಗಿದ ಸ್ವಾಗತ ಭಾರತೀ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
 
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಧ್ಯಾ. ವಿ.ಶೆಟ್ಟಿ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ವಿದ್ಯಾಲಯಗಳಿಗೂ ಸಹಾಯ ಹಸ್ತ ನೀಡಲಾಗುತ್ತಿದೆ. ಈ ವಿದ್ಯಾಲಯದಲ್ಲಿ ತರಕಾರಿ ತೋಟವನ್ನು ಮಾಡಲು ನಾವು ಸಹಾಯ ಮಾಡುತ್ತೇವೆ. ಈ ವಿದ್ಯಾಲಯದ ಪರಿಸರವನ್ನು ಹಚ್ಚಹಸಿರಾಗಿರಿಸೋಣ ಎಂದು ಅಭಿಪ್ರಾಯಪಟ್ಟರು.

ಶಾಲಾ ಸಮಿತಿಯ ಕಾರ್ಯದರ್ಶಿ ಸತ್ಯಶಂಕರ ಭಟ್ ಹಿಳ್ಳೆಮನೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾ ಸರಸ್ವತಿ ಉಪಸ್ಥಿತರಿದ್ದರು. ಶಾಲಾ ಸಮಿತಿಯ ಜೊತೆ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಶ್ರೀಜಾ ಗಿರೀಶ್‌ರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಜಯಶ್ರೀ ಸ್ವಾಗತಿಸಿ ಸುಧನ್ವ ವಂದಿಸಿದರು. ಶ್ರಾವ್ಯಾ ಕಾರ್ಯಕ್ರಮ ನಿರೂಪಿಸಿದರು.

Mar 12, 2015

ವೈದ್ಯರೊಂದಿಗೆ ಮಾತುಕತೆ


“ಬೆಳವಣಿಗೆಯ ಆರಂಭದ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ತಮ್ಮ ಕೆಲಸಗಳನ್ನು ತಾವೇ ಮಾಡುವಂತೆ ಪ್ರೇರೇಪಿಸಬೇಕು. ತಮ್ಮ ನಿತ್ಯ ನೈಮಿತ್ತಿಕ ಕಾರ್ಯಗಳನ್ನು ತಾವೇ ಶ್ರದ್ಧೆ ಮತ್ತು ಪ್ರೀತಿಯಿಂದ ಮಾಡಿಸುವುದು ಹೆತ್ತವರ ಕರ್ತವ್ಯ. ವಿದ್ಯಾರ್ಥಿಗಳು ಏನು ಮಾಡುತ್ತಿದ್ದಾರೆ ಮತ್ತು ಏನು ಕಲಿಯುತ್ತಿದ್ದಾರೆ ಎಂಬ ಬಗ್ಗೆ ಪೂರ್ಣ ಮಹಿತಿ ಹೆತ್ತವರಿಗೆ ಇರಬೇಕು. ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯ ಅರಿವು ಮೂಡಿಸುವುದು ಹೆತ್ತವರ ಹೊಣೆಗಾರಿಕೆ” ಎಂದು ಖ್ಯಾತ ವೈದ್ಯೆ ಡಾ| ವಾರುಣಿ ಶ್ರೀರಾಮ್ ಅಭಿಪ್ರಾಯಪಟ್ಟರು. ಅವರು 26.02.2015 ಗುರುವಾರ ನಮ್ಮ ವಿದ್ಯಾಪೀಠದಲ್ಲಿ ಪೋಷಕರಿಗಾಗಿ ನಡೆದ ‘ವೈದ್ಯರೊಂದಿಗೆ ಮಾತುಕತೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಿಕ್ಷಕಿಯರಾದ ಕುಸುಮಾ ಸ್ವಾಗತಿಸಿ ಶಿಲ್ಪಾ.ಎಸ್ ವಂದಿಸಿದರು. ಶಿವಕುಮಾರಿ.ಪಿ ಕಾರ್ಯಕ್ರಮ ನಿರೂಪಿಸಿದರು.